ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…