ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು,
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನ ಇತ್ಯರ್ಥ ಮಾಡುವ ಮೂಲಕ ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು, ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ನಗರದಲ್ಲಿ ನಡೆದಿದೆ.
ಈ ವಿಚಾರವಾಗಿ ನ್ಯಾಯಾಧೀಶರು ಪರಿಶೀಲಿಸಿ ಮನವೊಲಿಸಿದ ನಂತರ ಎರಡು ವರ್ಷಗಳ ಬಳಿಕ ತಮ್ಮ ಮನಸ್ಸು ಬದಲಾಯಿಸಿ ಮತ್ತೆ ಒಂದಾದ ಘಟನೆ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ಸಾಕ್ಷಿಯಾಯಿತು.
ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ದೊಡ್ಡಬಳ್ಳಾಪುರ ಮತ್ತು ವಕೀಲರು ಮತ್ತೆ ಒಂದಾದ ಇವರಿಗೆ ಶುಭ ಹಾರೈಸಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…