ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಎರಡು ವರ್ಷಗಳ ನಂತರ ಮತ್ತೆ ಒಂದಾದ ದಂಪತಿ: ಹಿರಿಯರ ಶುಭ ಹಾರೈಕೆ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು,

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನ ಇತ್ಯರ್ಥ ಮಾಡುವ ಮೂಲಕ ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು, ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ನಗರದಲ್ಲಿ ನಡೆದಿದೆ.

ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದ ತಾಲೂಕಿನ ಮಧುರೆ ಗ್ರಾಮದ ನಿವಾಸಿ ಅರಣ್ ಕುಮಾರ್ ಎಂ.ಸಿ (32) ಹಾಗೂ ಬೆಂಗಳೂರು ಉತ್ತರ ತಾಲೂಕು, ಅರಕೆರೆ ಪೋಸ್ಟ್, ಹೆಸರಘಟ್ಟ‌ ಹೋಬಳಿ, ಶಾನಭೋಗನಹಳ್ಳಿ ಗ್ರಾಮದ ನಿವಾಸಿ ನವ್ಯಶ್ರೀ.ಪಿ (23) ದಂಪತಿ ವಿಚ್ಛೇದನಕ್ಕಾಗಿ 2022ರಲ್ಲಿ ಕೋರ್ಟ್ ಮೇಟ್ಟಿಲೇರಿದ್ದರು.

ಈ ವಿಚಾರವಾಗಿ ನ್ಯಾಯಾಧೀಶರು ಪರಿಶೀಲಿಸಿ ಮನವೊಲಿಸಿದ ನಂತರ ಎರಡು ವರ್ಷಗಳ ಬಳಿಕ ತಮ್ಮ ಮನಸ್ಸು ಬದಲಾಯಿಸಿ ಮತ್ತೆ ಒಂದಾದ ಘಟನೆ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ಸಾಕ್ಷಿಯಾಯಿತು.

ಈ ದಂಪತಿ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆ.ಎಮ್.ಎಫ್. ಸಿ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಶಿಲ್ಪ.ಹೆಚ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.

ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ದೊಡ್ಡಬಳ್ಳಾಪುರ ಮತ್ತು ವಕೀಲರು ಮತ್ತೆ ಒಂದಾದ ಇವರಿಗೆ ಶುಭ ಹಾರೈಸಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

29 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago