ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು,
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನ ಇತ್ಯರ್ಥ ಮಾಡುವ ಮೂಲಕ ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು, ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ನಗರದಲ್ಲಿ ನಡೆದಿದೆ.
ಈ ವಿಚಾರವಾಗಿ ನ್ಯಾಯಾಧೀಶರು ಪರಿಶೀಲಿಸಿ ಮನವೊಲಿಸಿದ ನಂತರ ಎರಡು ವರ್ಷಗಳ ಬಳಿಕ ತಮ್ಮ ಮನಸ್ಸು ಬದಲಾಯಿಸಿ ಮತ್ತೆ ಒಂದಾದ ಘಟನೆ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ಸಾಕ್ಷಿಯಾಯಿತು.
ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ದೊಡ್ಡಬಳ್ಳಾಪುರ ಮತ್ತು ವಕೀಲರು ಮತ್ತೆ ಒಂದಾದ ಇವರಿಗೆ ಶುಭ ಹಾರೈಸಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…