ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಎರಡು ವರ್ಷಗಳ ನಂತರ ಮತ್ತೆ ಒಂದಾದ ದಂಪತಿ: ಹಿರಿಯರ ಶುಭ ಹಾರೈಕೆ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು,

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನ ಇತ್ಯರ್ಥ ಮಾಡುವ ಮೂಲಕ ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು, ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ನಗರದಲ್ಲಿ ನಡೆದಿದೆ.

ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದ ತಾಲೂಕಿನ ಮಧುರೆ ಗ್ರಾಮದ ನಿವಾಸಿ ಅರಣ್ ಕುಮಾರ್ ಎಂ.ಸಿ (32) ಹಾಗೂ ಬೆಂಗಳೂರು ಉತ್ತರ ತಾಲೂಕು, ಅರಕೆರೆ ಪೋಸ್ಟ್, ಹೆಸರಘಟ್ಟ‌ ಹೋಬಳಿ, ಶಾನಭೋಗನಹಳ್ಳಿ ಗ್ರಾಮದ ನಿವಾಸಿ ನವ್ಯಶ್ರೀ.ಪಿ (23) ದಂಪತಿ ವಿಚ್ಛೇದನಕ್ಕಾಗಿ 2022ರಲ್ಲಿ ಕೋರ್ಟ್ ಮೇಟ್ಟಿಲೇರಿದ್ದರು.

ಈ ವಿಚಾರವಾಗಿ ನ್ಯಾಯಾಧೀಶರು ಪರಿಶೀಲಿಸಿ ಮನವೊಲಿಸಿದ ನಂತರ ಎರಡು ವರ್ಷಗಳ ಬಳಿಕ ತಮ್ಮ ಮನಸ್ಸು ಬದಲಾಯಿಸಿ ಮತ್ತೆ ಒಂದಾದ ಘಟನೆ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ಸಾಕ್ಷಿಯಾಯಿತು.

ಈ ದಂಪತಿ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆ.ಎಮ್.ಎಫ್. ಸಿ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಶಿಲ್ಪ.ಹೆಚ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.

ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ದೊಡ್ಡಬಳ್ಳಾಪುರ ಮತ್ತು ವಕೀಲರು ಮತ್ತೆ ಒಂದಾದ ಇವರಿಗೆ ಶುಭ ಹಾರೈಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago