ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.
ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.
ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.
ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.
ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…