ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಎರಡು ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.

ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.

ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.

ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.

ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

2 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

21 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

21 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

21 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago