ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.
ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.
ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.
ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.
ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…