ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.
ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.
ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.
ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.
ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…