ದೊಡ್ಡಬಳ್ಳಾಪುರ: ನೆನ್ನೆ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಬಾಳೆ, ಈರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ.
ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ ಎಂಬ ರೈತರಿಗೆ ಸೇರಿದ್ದ ಬಾಳೆ ಗಿಡಗಳು ಅರ್ಧಕ್ಕೆ ಮುರಿದು ಬಿದ್ದಿವೆ.
ಚೆನ್ನರಾಯಪ್ಪ ಎಂಬ ರೈತನಿಗೆ ಸೇರಿದ್ದ 1 ಎಕರೆಯಲ್ಲಿ ಬೆಳೆದಿದ್ದ ಈರೆಗಿಡ ಸಹ ನೆಲಕಚ್ಚಿದೆ. ಚಪ್ಪರ ಸಹಿತ ನೆಲಕ್ಕೆ ಬಿದ್ದ ಕಾರಣ ಬೆಳೆ ಸಂಪೂರ್ಣ ನಾಶವಾಗಿದೆ.
ಇನ್ನೊಂದು ತಿಂಗಳಲ್ಲಿ ಬೆಳೆ ಕಟಾವು ಮಾಡಬೇಕಿತ್ತು, ಬೆಳೆ ಕಟಾವಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರು, ಆದರೆ, ನಿನ್ನೆ ಸಂಜೆ ಬಂದ ಬಿರುಗಾಳಿ ಸಹಿತ ಮಳೆಗೆ ಬೆಳೆ ನಾಶವಾಗಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದೇವೆ ಮಳೆಯಿಂದಾಗಿ ನಮಗೆ ತುಂಬಾ ನಷ್ಟವಾಗಿದೆ, ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…