ದೊಡ್ಡಬಳ್ಳಾಪುರ: ನೆನ್ನೆ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಬಾಳೆ, ಈರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ.
ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ ಎಂಬ ರೈತರಿಗೆ ಸೇರಿದ್ದ ಬಾಳೆ ಗಿಡಗಳು ಅರ್ಧಕ್ಕೆ ಮುರಿದು ಬಿದ್ದಿವೆ.
ಚೆನ್ನರಾಯಪ್ಪ ಎಂಬ ರೈತನಿಗೆ ಸೇರಿದ್ದ 1 ಎಕರೆಯಲ್ಲಿ ಬೆಳೆದಿದ್ದ ಈರೆಗಿಡ ಸಹ ನೆಲಕಚ್ಚಿದೆ. ಚಪ್ಪರ ಸಹಿತ ನೆಲಕ್ಕೆ ಬಿದ್ದ ಕಾರಣ ಬೆಳೆ ಸಂಪೂರ್ಣ ನಾಶವಾಗಿದೆ.
ಇನ್ನೊಂದು ತಿಂಗಳಲ್ಲಿ ಬೆಳೆ ಕಟಾವು ಮಾಡಬೇಕಿತ್ತು, ಬೆಳೆ ಕಟಾವಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರು, ಆದರೆ, ನಿನ್ನೆ ಸಂಜೆ ಬಂದ ಬಿರುಗಾಳಿ ಸಹಿತ ಮಳೆಗೆ ಬೆಳೆ ನಾಶವಾಗಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದೇವೆ ಮಳೆಯಿಂದಾಗಿ ನಮಗೆ ತುಂಬಾ ನಷ್ಟವಾಗಿದೆ, ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…