ದೊಡ್ಡಬಳ್ಳಾಪುರ: ನೆನ್ನೆ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಬಾಳೆ, ಈರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ.
ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ ಎಂಬ ರೈತರಿಗೆ ಸೇರಿದ್ದ ಬಾಳೆ ಗಿಡಗಳು ಅರ್ಧಕ್ಕೆ ಮುರಿದು ಬಿದ್ದಿವೆ.
ಚೆನ್ನರಾಯಪ್ಪ ಎಂಬ ರೈತನಿಗೆ ಸೇರಿದ್ದ 1 ಎಕರೆಯಲ್ಲಿ ಬೆಳೆದಿದ್ದ ಈರೆಗಿಡ ಸಹ ನೆಲಕಚ್ಚಿದೆ. ಚಪ್ಪರ ಸಹಿತ ನೆಲಕ್ಕೆ ಬಿದ್ದ ಕಾರಣ ಬೆಳೆ ಸಂಪೂರ್ಣ ನಾಶವಾಗಿದೆ.
ಇನ್ನೊಂದು ತಿಂಗಳಲ್ಲಿ ಬೆಳೆ ಕಟಾವು ಮಾಡಬೇಕಿತ್ತು, ಬೆಳೆ ಕಟಾವಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರು, ಆದರೆ, ನಿನ್ನೆ ಸಂಜೆ ಬಂದ ಬಿರುಗಾಳಿ ಸಹಿತ ಮಳೆಗೆ ಬೆಳೆ ನಾಶವಾಗಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದೇವೆ ಮಳೆಯಿಂದಾಗಿ ನಮಗೆ ತುಂಬಾ ನಷ್ಟವಾಗಿದೆ, ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…