ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಬಾಳೆ ತೋಟಕ್ಕೂ ಹಾನಿಯಾಗಿರುವ ಘಟನೆ ನಡೆದಿದೆ…
ಪೆರಮಗೊಂಡನಹಳ್ಳಿ ಗ್ರಾಮದ ರೈತ ಮುನೇಗೌಡರವರು ತಮ್ಮ ಎರಡು ಎಕರೆ ಭೂಮಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಾಳೆ ತೋಟ ಮಾಡಿದ್ದರು.
ಇದೀಗ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನೆಲಕಚ್ಚಿದೆ.
ನೆಲಕ್ಕೆ ಉರುಳಿದ ಬಾಳೆ ಗೊನೆಗಳು ಸಂಪೂರ್ಣ ಕಟಾವಿಗೆ ಬಂದಿದ್ದವು. ಒಂದು ಕೆಜಿಗೆ 30-40 ರೂ. ಬಾಳೆ ಮಾರಾಟ ಮಾಡುತ್ತಿದ್ದ ರೈತನೀಗಿಗ ದೊಡ್ಡ ಪ್ರಮಾಣದಲ್ಲಿ ಅಂದರೆ ಸುಮಾರು 5-6ಲಕ್ಷ ರೂ. ನಷ್ಟವಾಗಿದೆ ಎಂದು ರೈತ ತಿಳಿಸಿದ್ದಾರೆ.
ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಭೇಟಿ ನೀಡಿ. ಹಾನಿಗೊಳಗಾದ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತ ಮುನೇಗೌಡ ಮನವಿ ಮಾಡಿದ್ದಾರೆ..
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…
ದೇವನಹಳ್ಳಿ: ತೈಲ ಬೆಲೆ ಏರಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…
ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…
ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…