ಬಿರುಸಿನಿಂದ ನಡೆಯುತ್ತಿರುವ ಟಿಎಪಿಎಂಸಿಎಸ್ ಮತದಾನ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

5,571 ಮತದಾರರಿದ್ದು, ಇಂದು ನಡೆಯುತ್ತಿರುವ ಮತದಾನಕ್ಕೆ ಮತದಾನ ಹಾಗೂ ಮತಗಳ ಎಣಿಕೆಗಾಗಿ 80 ಸಿಬ್ಬಂದಿ ನೇಮಿಸಲಾಗಿದೆ. 12 ಕೊಠಡಿಗಳಲ್ಲಿ ಮತದಾನ ನಡೆಯುತ್ತಿದೆ. ಪ್ರತಿಯೊಂದು ಕೊಠಡಿಯಲ್ಲೂ 8 ಮತಪೆಟ್ಟಿಗೆಗಳು ಇವೆ.

ಮತದಾರರು ಟಿಎಪಿಎಂಸಿಎಸ್ ವತಿಯಿಂದ ನೀಡಲಾಗಿರುವ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಮತದಾನ ಮಾಡಲು ತೆರಳುತ್ತಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ನಡೆಯಲಿದೆ. ಸುಗಮ ಮತದಾನಕ್ಕಾಗಿ ಪೊಲೀಸ್ ಬಂದೋಬಸ್ತ್ ಸಹ ಏರ್ಪಡಿಸಲಾಗಿದೆ.

ಅಂತಿಮ ಚುನಾವಣಾ ಕಣದಲ್ಲಿ ‘ಎ’ ತರಗತಿಯ 5 ನಿರ್ದೇಶಕ ಸ್ಥಾನಗಳಿಂದ 9 ಜನ, ‘ಬಿ’ ತರಗತಿಯ 8 ನಿರ್ದೇಶಕ ಸ್ಥಾನಗಳಿಗೆ 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

‘ಎ’ ತರಗತಿಯಲ್ಲಿ 20 ಜನ ಮತದಾರರು ಇದ್ದು, ಒಬ್ಬರು 5 ಜನ ನಿರ್ದೆಶಕರನ್ನು ಆಯ್ಕೆಮಾಡಬೇಕು. ‘ಬಿ’ ತರಗತಿಯಲ್ಲಿ 5, 571 ಜನ ಮತದಾರರು ಇದ್ದು, ಒಬ್ಬರು 8 ನಿರ್ದೆಶಕರನ್ನು ಆಯ್ಕೆ ಮಾಡಬೇಕಿದೆ.

ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

2 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

10 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

10 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

22 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

24 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

24 hours ago