ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..
5,571 ಮತದಾರರಿದ್ದು, ಇಂದು ನಡೆಯುತ್ತಿರುವ ಮತದಾನಕ್ಕೆ ಮತದಾನ ಹಾಗೂ ಮತಗಳ ಎಣಿಕೆಗಾಗಿ 80 ಸಿಬ್ಬಂದಿ ನೇಮಿಸಲಾಗಿದೆ. 12 ಕೊಠಡಿಗಳಲ್ಲಿ ಮತದಾನ ನಡೆಯುತ್ತಿದೆ. ಪ್ರತಿಯೊಂದು ಕೊಠಡಿಯಲ್ಲೂ 8 ಮತಪೆಟ್ಟಿಗೆಗಳು ಇವೆ.
ಮತದಾರರು ಟಿಎಪಿಎಂಸಿಎಸ್ ವತಿಯಿಂದ ನೀಡಲಾಗಿರುವ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಮತದಾನ ಮಾಡಲು ತೆರಳುತ್ತಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ನಡೆಯಲಿದೆ. ಸುಗಮ ಮತದಾನಕ್ಕಾಗಿ ಪೊಲೀಸ್ ಬಂದೋಬಸ್ತ್ ಸಹ ಏರ್ಪಡಿಸಲಾಗಿದೆ.
ಅಂತಿಮ ಚುನಾವಣಾ ಕಣದಲ್ಲಿ ‘ಎ’ ತರಗತಿಯ 5 ನಿರ್ದೇಶಕ ಸ್ಥಾನಗಳಿಂದ 9 ಜನ, ‘ಬಿ’ ತರಗತಿಯ 8 ನಿರ್ದೇಶಕ ಸ್ಥಾನಗಳಿಗೆ 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
‘ಎ’ ತರಗತಿಯಲ್ಲಿ 20 ಜನ ಮತದಾರರು ಇದ್ದು, ಒಬ್ಬರು 5 ಜನ ನಿರ್ದೆಶಕರನ್ನು ಆಯ್ಕೆಮಾಡಬೇಕು. ‘ಬಿ’ ತರಗತಿಯಲ್ಲಿ 5, 571 ಜನ ಮತದಾರರು ಇದ್ದು, ಒಬ್ಬರು 8 ನಿರ್ದೆಶಕರನ್ನು ಆಯ್ಕೆ ಮಾಡಬೇಕಿದೆ.
ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…