ಬಿರುಸಿನಿಂದ ನಡೆಯುತ್ತಿರುವ ಟಿಎಪಿಎಂಸಿಎಸ್ ಮತದಾನ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

5,571 ಮತದಾರರಿದ್ದು, ಇಂದು ನಡೆಯುತ್ತಿರುವ ಮತದಾನಕ್ಕೆ ಮತದಾನ ಹಾಗೂ ಮತಗಳ ಎಣಿಕೆಗಾಗಿ 80 ಸಿಬ್ಬಂದಿ ನೇಮಿಸಲಾಗಿದೆ. 12 ಕೊಠಡಿಗಳಲ್ಲಿ ಮತದಾನ ನಡೆಯುತ್ತಿದೆ. ಪ್ರತಿಯೊಂದು ಕೊಠಡಿಯಲ್ಲೂ 8 ಮತಪೆಟ್ಟಿಗೆಗಳು ಇವೆ.

ಮತದಾರರು ಟಿಎಪಿಎಂಸಿಎಸ್ ವತಿಯಿಂದ ನೀಡಲಾಗಿರುವ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಮತದಾನ ಮಾಡಲು ತೆರಳುತ್ತಿದ್ದಾರೆ. ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ನಡೆಯಲಿದೆ. ಸುಗಮ ಮತದಾನಕ್ಕಾಗಿ ಪೊಲೀಸ್ ಬಂದೋಬಸ್ತ್ ಸಹ ಏರ್ಪಡಿಸಲಾಗಿದೆ.

ಅಂತಿಮ ಚುನಾವಣಾ ಕಣದಲ್ಲಿ ‘ಎ’ ತರಗತಿಯ 5 ನಿರ್ದೇಶಕ ಸ್ಥಾನಗಳಿಂದ 9 ಜನ, ‘ಬಿ’ ತರಗತಿಯ 8 ನಿರ್ದೇಶಕ ಸ್ಥಾನಗಳಿಗೆ 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

‘ಎ’ ತರಗತಿಯಲ್ಲಿ 20 ಜನ ಮತದಾರರು ಇದ್ದು, ಒಬ್ಬರು 5 ಜನ ನಿರ್ದೆಶಕರನ್ನು ಆಯ್ಕೆಮಾಡಬೇಕು. ‘ಬಿ’ ತರಗತಿಯಲ್ಲಿ 5, 571 ಜನ ಮತದಾರರು ಇದ್ದು, ಒಬ್ಬರು 8 ನಿರ್ದೆಶಕರನ್ನು ಆಯ್ಕೆ ಮಾಡಬೇಕಿದೆ.

ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

6 hours ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

18 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

23 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

1 day ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago