ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ ಗ್ರಾಮದಲ್ಲಿ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಆರಾಧ್ಯ ದೈವಗಳಾದ ಉದ್ಭವ ತಿಮ್ಮರಾಯ ಸ್ವಾಮಿ ಹಾಗೂ ಅಭಯ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕುಟುಂಬದವರು ಮಗುವಿನ ಸುಖ, ಆರೋಗ್ಯ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಕಾರ್ಯಕ್ರಮದ ಅಂಗವಾಗಿ ಬಿಸವನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 40 ವಿದ್ಯಾರ್ಥಿಗಳಿಗೆ ಅಗತ್ಯವಾದ ಶಾಲಾ ನೋಟ್‌ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು. ಅಲ್ಲದೆ, ಶಾಲಾ ಮಕ್ಕಳಿಗೆ ಅನ್ನದಾನ ಏರ್ಪಡಿಸಿ ಸಿಹಿ ಊಟವನ್ನು ನೀಡಲಾಯಿತು.

ಶಿಕ್ಷಣ ಮತ್ತು ಸೇವೆಗೆ ಪ್ರಾಮುಖ್ಯತೆ ನೀಡುವ ಈ ಸಮಾಜಮುಖಿ ಕಾರ್ಯವನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾಗ್ಯಮ್ಮ ಅವರ ಪುತ್ರ ತಿಮ್ಮರಾಯಪ್ಪ, ಗ್ರಾಮದ ಮುಖಂಡರಾದ ನಾರಾಯಣಸ್ವಾಮಿ ಎಂ, ರಾಮಯ್ಯ, ಪರಶುರಾಮ ಬಿ.ಕೆ, ಯಲ್ಲಪ್ಪ, ಆಂಜಿನಪ್ಪ (ಬೆಟ್ಟ) ಹಾಗೂ ರವಿಕುಮಾರ್ ಎಂ. ಸೇರಿದಂತೆ ಗ್ರಾಮದ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದು, ಅದ್ವಿತಾಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳಿಗೆ ಅನ್ನದಾನ ಹಾಗೂ ಶಿಕ್ಷಣ ಸಾಮಗ್ರಿಗಳ ವಿತರಣೆಯಂತಹ ಸಮಾಜಮುಖಿ ಸೇವೆಯೊಂದಿಗೆ ಆಚರಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago