ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…