ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…