ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…