ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…