ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ, ಪ್ರಾಣಿ-ಪಕ್ಷಿ ಸೇರಿದಂತೆ ಜೀವ ಸಂಕುಲಗಳು ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಲ್ಲಿ ಜಲಮೂಲಗಳು, ಕೆರೆ ಕಟ್ಟೆಗಳು ಬರಿದಾಗುತ್ತಿದ್ದು, ಪ್ರಾಣಿ, ಪಕ್ಷಿಗಳು ಬಿಸಿಲಿನ ಬೇಗೆ ತಾಳಲಾರದೆ, ಸರಿಯಾಗಿ ನೀರು ಸಿಗದೆ ನಿತ್ರಾಣಗೊಳ್ಳುತ್ತಿವೆ.
ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ತಾಲೂಕಿನ ತೂಬಗೆರೆ ಹೋಬಳಿ ದೇವರಬೆಟ್ಟ ಅರಣ್ಯ ಪ್ರದೇಶದಲ್ಲಿ ಪರಿಸರ ಸಂರಕ್ಷಣಾ ಸಮಿತಿ ಹಾಗು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕಾಡು ಪ್ರಾಣಿಗಳಿಗೆ ನೀರುಣಿಸುವ ಉದ್ದೇಶದಿಂದ ತೊಟ್ಟಿಗಳಿಗೆ ಟ್ಯಾಂಕರ್ ಮುಖಾಂತರ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ದೇವರ ಬೆಟ್ಟ ಅರಣ್ಯದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಅರಣ್ಯದಲ್ಲಿ ನೀರಿನ ಅಂಶ ಕಡಿಮೆಯಾಗಿ ಹಳ್ಳ ಕೊಳ್ಳಗಳು ನೀರಿಲ್ಲದೆ ಬತ್ತಿ ಹೋಗಿವೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗಿ ಕಿಲೋ ಮೀಟರ್ ಗಟ್ಟಲೆ ನಡೆದು ಹೋಗಿ ನೀರು ಕುಡಿಯಲು ಕಾಡುಪ್ರಾಣಿಗಳಿಗೆ ಅಸಾಧ್ಯ. ಇದನ್ನ ತಪ್ಪಿಸಲು ಕಾಡಿನ ಒಳಗೆ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲಾಯಿತು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…