ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 2,82,554 ಲೀಟರ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 70,582 ಲೀಟರ್ ಹೆಚ್ಚುವರಿ ಮಾರಾಟ ದಾಖಲಾಗಿದೆ.

ಅಬಕಾರಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಬಿಯರ್ ಮಾರಾಟದಲ್ಲಿ ಶೇ.33.30ರಷ್ಟು ಏರಿಕೆ ಕಂಡುಬಂದಿದೆ.
ರಾಜ್ಯಾದ್ಯಂತ ತಾಪಮಾನ ಏರಿಕೆಯಿಂದ ಜನರು ತಂಪು ಪಾನೀಯಗಳತ್ತ ಮುಖ ಮಾಡಿದರೆ, ಮದ್ಯಪ್ರಿಯರು ಕೋಲ್ಡ್ ಬಿಯರ್‌ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಜಿಲ್ಲೆಯಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಸಮೀಪ ದಾಖಲಾಗಿದ್ದರಿಂದ ಬಿಯರ್ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ.

ಕಳೆದ ವರ್ಷಕ್ಕಿಂತ ಭಾರೀ ಜಿಗಿತ

2025-26ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಒಟ್ಟು 2,11,972 ಲೀಟರ್ ಬಿಯರ್ ಮಾರಾಟವಾಗಿತ್ತು. ಆದರೆ 2026-27ನೇ ಸಾಲಿನ ಇದೇ ಅವಧಿಯಲ್ಲಿ ಅದು 2,82,554 ಲೀಟರ್‌ಗೆ ಏರಿಕೆಯಾಗಿದೆ.

ಏಪ್ರಿಲ್ ತಿಂಗಳಲ್ಲೇ ಕಳೆದ ವರ್ಷದ 1,06,844 ಲೀಟರ್‌ಗಳ ಮಾರಾಟವಾಗಿತ್ತು. ಈ ಬಾರಿ 1,44,251 ಲೀಟರ್‌ಗೆ ಏರಿಕೆಯಾಗಿದೆ. ಮೇ ತಿಂಗಳಲ್ಲೂ 1,05,128 ಲೀಟರ್‌ನಿಂದ 1,38,303 ಲೀಟರ್‌ಗೆ ಏರಿಕೆ ಕಂಡಿದೆ.

ಮಳೆಗಾಲ ಆರಂಭವಾದರೂ ಬೇಡಿಕೆ ಕುಸಿತವಿಲ್ಲ

ಸಾಮಾನ್ಯವಾಗಿ ಮಳೆಗಾಲ ಆರಂಭವಾದ ಬಳಿಕ ಬಿಯರ್ ಮಾರಾಟದಲ್ಲಿ ಇಳಿಕೆ ಕಂಡುಬರುತ್ತದೆ. ಆದರೆ ಈ ಬಾರಿ ಜೂನ್ ಮೊದಲ ವಾರದವರೆಗೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೇ ಬಿಸಿಲಿನ ತಾಪ ಮುಂದುವರಿದ ಹಿನ್ನೆಲೆಯಲ್ಲಿ ಬಿಯರ್ ಬೇಡಿಕೆ ಕಡಿಮೆಯಾಗಿಲ್ಲ. ಮಳೆಗಾಲದಲ್ಲೂ ಬಿಯರ್ ಮಾರಾಟ ಸ್ಥಿರವಾಗಿದೆ.

ಹೊಸಕೋಟೆ ನಂ.1, ದೊಡ್ಡಬಳ್ಳಾಪುರದಲ್ಲಿ ಅತಿ‌ ಹೆಚ್ಚು ಬೆಳವಣಿಗೆ

ತಾಲೂಕುಗಳವಾರು ಮಾರಾಟದ ಅಂಕಿ-ಅಂಶಗಳನ್ನು ಗಮನಿಸಿದರೆ ಹೊಸಕೋಟೆ ತಾಲೂಕು ಮೊದಲ ಸ್ಥಾನದಲ್ಲಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೊಸಕೋಟೆಯಲ್ಲಿ 85,418 ಲೀಟರ್ ಬಿಯರ್ ಮಾರಾಟವಾಗಿದೆ. ಅದರ ನಂತರ
ದೊಡ್ಡಬಳ್ಳಾಪುರ – 72,536 ಲೀಟರ್
ದೇವನಹಳ್ಳಿ – 63,542 ಲೀಟರ್
ನೆಲಮಂಗಲ – 61,058 ಲೀಟರ್ ಮಾರಾಟವಾಗಿದೆ.

ಆದರೆ ಬೆಳವಣಿಗೆಯ ದೃಷ್ಟಿಯಿಂದ ನೋಡಿದರೆ ದೊಡ್ಡಬಳ್ಳಾಪುರ ತಾಲೂಕು ಅಚ್ಚರಿ ಮೂಡಿಸಿದ್ದು, ಕಳೆದ ವರ್ಷಕ್ಕಿಂತ ಶೇ.43.19ರಷ್ಟು ಮಾರಾಟ ಹೆಚ್ಚಳ ದಾಖಲಿಸಿದೆ.

ವಲಸೆ ಕಾರ್ಮಿಕರ ಸಂಖ್ಯೆಯೂ ಕಾರಣ?

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಬಕಾರಿ ಇಲಾಖೆ ಮೂಲಗಳ ಪ್ರಕಾರ, ಈ ವರ್ಗದ ಗ್ರಾಹಕರಿಂದಲೂ ಬಿಯರ್‌ಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಬೇಸಿಗೆಯ ತಾಪಮಾನ, ಕೈಗಾರಿಕಾ ವಲಯಗಳ ವಿಸ್ತರಣೆ ಹಾಗೂ ಜನರ ಖರೀದಿ ಸಾಮರ್ಥ್ಯ ಹೆಚ್ಚಳವು ಮಾರಾಟ ಏರಿಕೆಗೆ ಕಾರಣಗಳಾಗಿವೆ.

ತಾಲೂಕುವಾರು ಬಿಯರ್ ಮಾರಾಟ (ಏಪ್ರಿಲ್-ಮೇ)

ತಾಲೂಕು            2025-26              2026-27

ನೆಲಮಂಗಲ       46,713 ಲೀ           61,058 ಲೀ

ದೊಡ್ಡಬಳ್ಳಾಪುರ  50,658 ಲೀ           72,536 ಲೀ

ದೇವನಹಳ್ಳಿ         49,237 ಲೀ           63,542 ಲೀ

ಹೊಸಕೋಟೆ       65,364 ಲೀ           85,418 ಲೀ

ಒಟ್ಟು                  2,11,972 ಲೀ        2,82,554 ಲೀ

ತಜ್ಞರ ಅಭಿಪ್ರಾಯ

ಬೇಸಿಗೆಯ ತೀವ್ರತೆ ಹೆಚ್ಚಾದಂತೆ ಬಿಯರ್ ಸೇರಿದಂತೆ ತಂಪು ಪಾನೀಯಗಳ ಬಳಕೆ ಹೆಚ್ಚಾಗುವುದು ಸಹಜ. ಆದರೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಮದ್ಯ ಸೇವನೆ ಮಿತವಾಗಿರಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ವರ್ಷದ ಏಪ್ರಿಲ್-ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ಬಿಯರ್ ಮಾರಾಟದಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಅಬಕಾರಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಬೇಸಿಗೆ ಸಯಮಯದಲ್ಲಿ ಬಿಯರ್ ವ್ಯಾಪಾರದಲ್ಲಿ ಗಣನೀಯವಾಗಿ ಏರಿಕೆ ಕಂಡಿತ್ತು. ಈಗಲೂ ಬೇಡಿಕೆ ಹಾಗೇ ಇದೆ ಎಂದು ರಾಹುಲ್, ಮದ್ಯದಂಗಡಿ ಮಾಲೀಕ ದೊಡ್ಡಬಳ್ಳಾಪುರ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

14 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago