ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 2,82,554 ಲೀಟರ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 70,582 ಲೀಟರ್ ಹೆಚ್ಚುವರಿ ಮಾರಾಟ ದಾಖಲಾಗಿದೆ.

ಅಬಕಾರಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಬಿಯರ್ ಮಾರಾಟದಲ್ಲಿ ಶೇ.33.30ರಷ್ಟು ಏರಿಕೆ ಕಂಡುಬಂದಿದೆ.
ರಾಜ್ಯಾದ್ಯಂತ ತಾಪಮಾನ ಏರಿಕೆಯಿಂದ ಜನರು ತಂಪು ಪಾನೀಯಗಳತ್ತ ಮುಖ ಮಾಡಿದರೆ, ಮದ್ಯಪ್ರಿಯರು ಕೋಲ್ಡ್ ಬಿಯರ್‌ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಜಿಲ್ಲೆಯಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಸಮೀಪ ದಾಖಲಾಗಿದ್ದರಿಂದ ಬಿಯರ್ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ.

ಕಳೆದ ವರ್ಷಕ್ಕಿಂತ ಭಾರೀ ಜಿಗಿತ

2025-26ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಒಟ್ಟು 2,11,972 ಲೀಟರ್ ಬಿಯರ್ ಮಾರಾಟವಾಗಿತ್ತು. ಆದರೆ 2026-27ನೇ ಸಾಲಿನ ಇದೇ ಅವಧಿಯಲ್ಲಿ ಅದು 2,82,554 ಲೀಟರ್‌ಗೆ ಏರಿಕೆಯಾಗಿದೆ.

ಏಪ್ರಿಲ್ ತಿಂಗಳಲ್ಲೇ ಕಳೆದ ವರ್ಷದ 1,06,844 ಲೀಟರ್‌ಗಳ ಮಾರಾಟವಾಗಿತ್ತು. ಈ ಬಾರಿ 1,44,251 ಲೀಟರ್‌ಗೆ ಏರಿಕೆಯಾಗಿದೆ. ಮೇ ತಿಂಗಳಲ್ಲೂ 1,05,128 ಲೀಟರ್‌ನಿಂದ 1,38,303 ಲೀಟರ್‌ಗೆ ಏರಿಕೆ ಕಂಡಿದೆ.

ಮಳೆಗಾಲ ಆರಂಭವಾದರೂ ಬೇಡಿಕೆ ಕುಸಿತವಿಲ್ಲ

ಸಾಮಾನ್ಯವಾಗಿ ಮಳೆಗಾಲ ಆರಂಭವಾದ ಬಳಿಕ ಬಿಯರ್ ಮಾರಾಟದಲ್ಲಿ ಇಳಿಕೆ ಕಂಡುಬರುತ್ತದೆ. ಆದರೆ ಈ ಬಾರಿ ಜೂನ್ ಮೊದಲ ವಾರದವರೆಗೂ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೇ ಬಿಸಿಲಿನ ತಾಪ ಮುಂದುವರಿದ ಹಿನ್ನೆಲೆಯಲ್ಲಿ ಬಿಯರ್ ಬೇಡಿಕೆ ಕಡಿಮೆಯಾಗಿಲ್ಲ. ಮಳೆಗಾಲದಲ್ಲೂ ಬಿಯರ್ ಮಾರಾಟ ಸ್ಥಿರವಾಗಿದೆ.

ಹೊಸಕೋಟೆ ನಂ.1, ದೊಡ್ಡಬಳ್ಳಾಪುರದಲ್ಲಿ ಅತಿ‌ ಹೆಚ್ಚು ಬೆಳವಣಿಗೆ

ತಾಲೂಕುಗಳವಾರು ಮಾರಾಟದ ಅಂಕಿ-ಅಂಶಗಳನ್ನು ಗಮನಿಸಿದರೆ ಹೊಸಕೋಟೆ ತಾಲೂಕು ಮೊದಲ ಸ್ಥಾನದಲ್ಲಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೊಸಕೋಟೆಯಲ್ಲಿ 85,418 ಲೀಟರ್ ಬಿಯರ್ ಮಾರಾಟವಾಗಿದೆ. ಅದರ ನಂತರ
ದೊಡ್ಡಬಳ್ಳಾಪುರ – 72,536 ಲೀಟರ್
ದೇವನಹಳ್ಳಿ – 63,542 ಲೀಟರ್
ನೆಲಮಂಗಲ – 61,058 ಲೀಟರ್ ಮಾರಾಟವಾಗಿದೆ.

ಆದರೆ ಬೆಳವಣಿಗೆಯ ದೃಷ್ಟಿಯಿಂದ ನೋಡಿದರೆ ದೊಡ್ಡಬಳ್ಳಾಪುರ ತಾಲೂಕು ಅಚ್ಚರಿ ಮೂಡಿಸಿದ್ದು, ಕಳೆದ ವರ್ಷಕ್ಕಿಂತ ಶೇ.43.19ರಷ್ಟು ಮಾರಾಟ ಹೆಚ್ಚಳ ದಾಖಲಿಸಿದೆ.

ವಲಸೆ ಕಾರ್ಮಿಕರ ಸಂಖ್ಯೆಯೂ ಕಾರಣ?

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಬಕಾರಿ ಇಲಾಖೆ ಮೂಲಗಳ ಪ್ರಕಾರ, ಈ ವರ್ಗದ ಗ್ರಾಹಕರಿಂದಲೂ ಬಿಯರ್‌ಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಬೇಸಿಗೆಯ ತಾಪಮಾನ, ಕೈಗಾರಿಕಾ ವಲಯಗಳ ವಿಸ್ತರಣೆ ಹಾಗೂ ಜನರ ಖರೀದಿ ಸಾಮರ್ಥ್ಯ ಹೆಚ್ಚಳವು ಮಾರಾಟ ಏರಿಕೆಗೆ ಕಾರಣಗಳಾಗಿವೆ.

ತಾಲೂಕುವಾರು ಬಿಯರ್ ಮಾರಾಟ (ಏಪ್ರಿಲ್-ಮೇ)

ತಾಲೂಕು            2025-26              2026-27

ನೆಲಮಂಗಲ       46,713 ಲೀ           61,058 ಲೀ

ದೊಡ್ಡಬಳ್ಳಾಪುರ  50,658 ಲೀ           72,536 ಲೀ

ದೇವನಹಳ್ಳಿ         49,237 ಲೀ           63,542 ಲೀ

ಹೊಸಕೋಟೆ       65,364 ಲೀ           85,418 ಲೀ

ಒಟ್ಟು                  2,11,972 ಲೀ        2,82,554 ಲೀ

ತಜ್ಞರ ಅಭಿಪ್ರಾಯ

ಬೇಸಿಗೆಯ ತೀವ್ರತೆ ಹೆಚ್ಚಾದಂತೆ ಬಿಯರ್ ಸೇರಿದಂತೆ ತಂಪು ಪಾನೀಯಗಳ ಬಳಕೆ ಹೆಚ್ಚಾಗುವುದು ಸಹಜ. ಆದರೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಮದ್ಯ ಸೇವನೆ ಮಿತವಾಗಿರಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ವರ್ಷದ ಏಪ್ರಿಲ್-ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ಬಿಯರ್ ಮಾರಾಟದಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಅಬಕಾರಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಬೇಸಿಗೆ ಸಯಮಯದಲ್ಲಿ ಬಿಯರ್ ವ್ಯಾಪಾರದಲ್ಲಿ ಗಣನೀಯವಾಗಿ ಏರಿಕೆ ಕಂಡಿತ್ತು. ಈಗಲೂ ಬೇಡಿಕೆ ಹಾಗೇ ಇದೆ ಎಂದು ರಾಹುಲ್, ಮದ್ಯದಂಗಡಿ ಮಾಲೀಕ ದೊಡ್ಡಬಳ್ಳಾಪುರ ತಿಳಿಸಿದ್ದಾರೆ.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

7 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

9 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

22 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

1 day ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago