ಬಿ‌.ಎಡ್, ಡಿ.ಎಡ್‌ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಬಿ.ಎಡ್ & ಡಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ದಿನಾಂಕ 2023 ರ ಆಗಸ್ಟ್ 21 ರಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು 2023 ರ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರಿಂದ ಧೃಡೀಕರಿಸಿ, ಹಾರ್ಡ್ ಪ್ರತಿಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnatak.gov.in ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990,
ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ:080-22866966,
ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444,
ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27725445,
ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882,
ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899 ಯನ್ನು ಸಂಪರ್ಕಿಸಬಹುದು.

ಬಿ.ಎಡ್ & ಡಿ.ಎಡ್ ನಲ್ಲಿ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಮತ್ತು ನಗರ ವಿಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಿ ಕಲಿಕಾ ಮತ್ತು ಬೋಧನಾ ಸಾಮಾಗ್ರಿಗಳನ್ನು ಖರೀದಿಸಲು ಆರ್ಥಿಕ ಸಹಾಯ ಮಾಡುವ ಹಿತ ದೃಷ್ಟಿಯಿಂದ National council for teacher education ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ Department of state education research and training ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸುಗಳ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ & ಡಿ.ಎಡ್ ಕೋರ್ಸುಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರಬೇಕು. ಅಭ್ಯರ್ಥಿ ಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಯು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಸಿಖ್,ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿದವರಾಗಿರಬೇಕು. ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25,000/- ಸಾವಿರದಂತೆ (ಗರಿಷ್ಠ 02 ವರ್ಷ) ಅನುದಾನವನ್ನು ನೀಡಲಾಗುವುದು.

ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ರೂ 6 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ, ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಈ ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ಇತರೆ ವಿದ್ಯಾರ್ಥಿವೇತನ/ಶಿಷ್ಯವೇತನ ಪಡೆಯಲು ಅರ್ಹರಿರುತ್ತಾರೆ. ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ/ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ.

ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ.ಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳನ್ನು ಪಡೆದಿರತಕ್ಕದ್ದು.

ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ. ಮೊದಲನೇ ವರ್ಷದಲ್ಲಿ ಪ್ರೋತ್ಸಾಹಧನ ಪಡೆದಿರುವ ಅಭ್ಯರ್ಥಿಗಳು ಎರಡನೇ ವರ್ಷಕ್ಕೆ ಪ್ರೋತ್ಸಾಹ ಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸತಕ್ಕದ್ದು. ಸುಳ್ಳು ಮಾಹಿತಿ, ದಾಖಲಾತಿ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಹಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago