ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8,500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.

ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.

ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.

ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.

ಇದೇ ವೇಳೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

19 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

19 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago