ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8,500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.

ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.

ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.

ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.

ಇದೇ ವೇಳೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

1 hour ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

4 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

9 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

12 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago