ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.
ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.
ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.
ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.
ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…