ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.
ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.
ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.
ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.
ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…