ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8,500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.

ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.

ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.

ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.

ಇದೇ ವೇಳೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago