ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲು ಮರದ ತಿಮ್ಮಕ್ಕ ವನ: 8,500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.

ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.

ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.

ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.

ಇದೇ ವೇಳೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

40 minutes ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

56 minutes ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago