ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.
ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.
ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.
ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.
ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…