ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಬಳಿಯ ಬಿ ಎಸ್ ಎಫ್ ಕ್ಯಾಂಪಸ್ ನಲ್ಲಿ ಹೊಸದಾಗಿ 8.500 ಗಿಡಗಳನ್ನು ನೆಡುವುದರ ಜೊತೆಗೆ ಆ ಪ್ರದೇಶಕ್ಕೆ ಸಾಲುಮರದ ತಿಮ್ಮಕ್ಕ ವನ ಎಂದು ನಾಮಕರಣ ಮಾಡಲಾಗಿದೆ.
ಬಿ ಎಸ್ ಎಫ್, ಗೋಕುಲ್ ದಾಸ್ ಎಕ್ಸ್ ಪೋರ್ಟ್ ಫೌಂಡೇಶನ್ ಮತ್ತು ಕ್ಯಾಚ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಕಾರಹಳ್ಳಿಯ ಬಿ ಎಸ್ ಎಫ್ ಅಧೀನದಲ್ಲಿರುವ ಗುಡ್ಡ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ 8.500 ವಿವಿಧ ಜಾತಿಯ ಗಿಡಗಳನ್ನು ನೆಡಲಾಗುವುದು. ಅಭಿಯಾನಕ್ಕೆ ಕರ್ನಾಟಕ ರತ್ನ, ಶತಾಯುಷಿ ಸಾಲುಮರದ ತಿಮ್ಮಕ್ಕ ಚಾಲನೆ ನೀಡಿದರು.
ಇತ್ತೀಚೆಗೆ ಸಾರ್ವಜನಿಕರಲ್ಲಿ ಪ್ರಕೃತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿರುತ್ತಾರೆ ಎಂದು ಬಿಎಸ್ ಎಫ್ ಅಧಿಕಾರಿ ಡಿ ಕೆ ಯಾದವ್ ಶ್ಲಾಘಿಸಿದರು.
ಬಿ ಎಸ್ ಎಫ್ ಕ್ಯಾಂಪಸ್ ನಲ್ಲೀಗ 8.500 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು ಸಮಾಜ ಮುಖಿ ಸಂಸ್ಥೆಗಳ ಸಹಯೋಗ ಅತ್ಯಗತ್ಯ ಎಂದು ಅವರು ಹೇಳಿದರು.
ಈ ವೇಳೆ ಬಿ ಎಸ್ ಎಫ್ ಅಧಿಕಾರಿ ಡಿ ಕೆ ಯಾದವ್,ಗೋಕುಲ್ ದಾಸ್ ಅಧಿಕಾರಿಗಳಾದ ಅಮಿತ್ ಶರ್ಮ,ಮಹಾಂತೇಶ್ ಬಂಗಾರಿ,ಪ್ರಣಾಲ್ ಗೋಸ್ವಾಮಿ ಸೇರಿದಂತೆ ಗೋಕುಲ್ ದಾಸ್ ಕಂಪೆನಿ ಹಾಗೂ ಕ್ಯಾಚ್ ಫೌಂಡೇಶನ್ ಸಿಬ್ಬಂದಿ ಭಾಗವಹಿಸಿದ್ದರು.
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…