ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು: ಧ ನ್ಯ ವಾ ದ  ಚಿಕ್ಕಬಳ್ಳಾಪುರ…ಎಂದು ತಿಳಿಸಿದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

1) ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳು

2) ಎಂ.ಎಸ್ ರಕ್ಷಾ ರಾಮಯ್ಯ(ಐ.ಎನ್.ಸಿ)-6,59,159 ಮತಗಳು

3) ನೋಟಾ(NOTA)-6596 (ನೋಟಾ ಗೆ ಮೂರನೇ ಸ್ಥಾನ)

ನನ್ನನ್ನು ದೊಡ್ಡಮಟ್ಟದಲ್ಲಿ ಆಶೀರ್ವದಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಸೇವಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟಕ್ಕೆ ದೊರೆತ ಪ್ರತಿಯೊಂದು ಮತವೂ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ ಹತ್ತು ವರ್ಷಗಳ ರಾಷ್ಟ್ರಸೇವೆಯ ತಪಸ್ಸಿಗೆ ದೊರೆತ ಅಭಿನಂದನೆ ಮತ್ತು ಮುಂದಿನ ಐದು ವರ್ಷಗಳ ವಿಕಾಸ ಪರ್ವಕ್ಕೆ ನೀಡಿರುವ ಜನಾದೇಶ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ನನ್ನನ್ನು ಬಿಂಬಲಿಸಿದ ನಮ್ಮ ಹಿರಿಯ ನಾಯಕರಾದ ಶ್ರೀ ಅಮಿತ್ ಶಾ, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿ ಹಾಗು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ಸುಮಾರು 40 ದಿನಗಳ ಕಾಲ ಹಗಲಿರುಳು ಶ್ರಮಿಸಿ ಈ ಐತಿಹಾಸಿಕ ಫಲಿತಾಂಶಕ್ಕೆ ಕಾರಣೀಭೂತರಾದ ನಮ್ಮ ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಹಿತೈಷಿಗಳಿಗೆ ಈ ಗೆಲುವನ್ನ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ವಿಕಸಿತ ಚಿಕ್ಕಬಳ್ಳಾಪುರದ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ನಿಮ್ಮೆಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago