ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
1) ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳು
2) ಎಂ.ಎಸ್ ರಕ್ಷಾ ರಾಮಯ್ಯ(ಐ.ಎನ್.ಸಿ)-6,59,159 ಮತಗಳು
3) ನೋಟಾ(NOTA)-6596 (ನೋಟಾ ಗೆ ಮೂರನೇ ಸ್ಥಾನ)
ನನ್ನನ್ನು ದೊಡ್ಡಮಟ್ಟದಲ್ಲಿ ಆಶೀರ್ವದಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಸೇವಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟಕ್ಕೆ ದೊರೆತ ಪ್ರತಿಯೊಂದು ಮತವೂ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ ಹತ್ತು ವರ್ಷಗಳ ರಾಷ್ಟ್ರಸೇವೆಯ ತಪಸ್ಸಿಗೆ ದೊರೆತ ಅಭಿನಂದನೆ ಮತ್ತು ಮುಂದಿನ ಐದು ವರ್ಷಗಳ ವಿಕಾಸ ಪರ್ವಕ್ಕೆ ನೀಡಿರುವ ಜನಾದೇಶ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ನನ್ನನ್ನು ಬಿಂಬಲಿಸಿದ ನಮ್ಮ ಹಿರಿಯ ನಾಯಕರಾದ ಶ್ರೀ ಅಮಿತ್ ಶಾ, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿ ಹಾಗು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.
ಸುಮಾರು 40 ದಿನಗಳ ಕಾಲ ಹಗಲಿರುಳು ಶ್ರಮಿಸಿ ಈ ಐತಿಹಾಸಿಕ ಫಲಿತಾಂಶಕ್ಕೆ ಕಾರಣೀಭೂತರಾದ ನಮ್ಮ ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಹಿತೈಷಿಗಳಿಗೆ ಈ ಗೆಲುವನ್ನ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ವಿಕಸಿತ ಚಿಕ್ಕಬಳ್ಳಾಪುರದ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ನಿಮ್ಮೆಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…