ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
1) ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳು
2) ಎಂ.ಎಸ್ ರಕ್ಷಾ ರಾಮಯ್ಯ(ಐ.ಎನ್.ಸಿ)-6,59,159 ಮತಗಳು
3) ನೋಟಾ(NOTA)-6596 (ನೋಟಾ ಗೆ ಮೂರನೇ ಸ್ಥಾನ)
ನನ್ನನ್ನು ದೊಡ್ಡಮಟ್ಟದಲ್ಲಿ ಆಶೀರ್ವದಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಸೇವಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟಕ್ಕೆ ದೊರೆತ ಪ್ರತಿಯೊಂದು ಮತವೂ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ ಹತ್ತು ವರ್ಷಗಳ ರಾಷ್ಟ್ರಸೇವೆಯ ತಪಸ್ಸಿಗೆ ದೊರೆತ ಅಭಿನಂದನೆ ಮತ್ತು ಮುಂದಿನ ಐದು ವರ್ಷಗಳ ವಿಕಾಸ ಪರ್ವಕ್ಕೆ ನೀಡಿರುವ ಜನಾದೇಶ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ನನ್ನನ್ನು ಬಿಂಬಲಿಸಿದ ನಮ್ಮ ಹಿರಿಯ ನಾಯಕರಾದ ಶ್ರೀ ಅಮಿತ್ ಶಾ, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿ ಹಾಗು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.
ಸುಮಾರು 40 ದಿನಗಳ ಕಾಲ ಹಗಲಿರುಳು ಶ್ರಮಿಸಿ ಈ ಐತಿಹಾಸಿಕ ಫಲಿತಾಂಶಕ್ಕೆ ಕಾರಣೀಭೂತರಾದ ನಮ್ಮ ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಹಿತೈಷಿಗಳಿಗೆ ಈ ಗೆಲುವನ್ನ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ವಿಕಸಿತ ಚಿಕ್ಕಬಳ್ಳಾಪುರದ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ನಿಮ್ಮೆಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…