ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯಲ್ಲಿ ಗೆದ್ದು, ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…