ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯಲ್ಲಿ ಗೆದ್ದು, ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…