ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯಲ್ಲಿ ಗೆದ್ದು, ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…