ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯಲ್ಲಿ ಗೆದ್ದು, ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…