ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ. ಕೇಸ್ ಒಂದರಲ್ಲಿ ‘ಬಿ ರಿಪೋರ್ಟ್’ ಹಾಕಲು ಸಾವಿತ್ರಿ ಬಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದರಂತೆ. ಈ ಕುರಿತು ಮೊಹಮ್ಮದ್ ಯೂನಸ್ ಎಂಬವರು ನೀಡಿದ ದೂರಿನ ಮೇರೆಗೆ ಸಾವಿತ್ರಿ ಬಾಯಿಯನ್ನು ಟ್ರ್ಯಾಪ್ ಮಾಡಲಾಗಿದೆ.
ಗೊವಿಂದಪುರ ಪೊಲೀಸ್ ಠಾಣೆಯ ಕ್ರೈಂ ನಂಬರ್ 144/25ರ ಕೇಸ್ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಸಲು ಸಾವಿತ್ರಿ ಬಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ 1.25 ಲಕ್ಷ ರೂ. ಹಣ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಸಾವಿತ್ರಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…