ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಲು ಪರ್ಯಾಯ ಜಾಗ ನೀಡುವ ಕುರಿತು ಸಭೆ

ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು‌ ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.

ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದಲ್ಲಿ ಅಗತ್ಯವಿರುವ ಕಡೆ ವ್ಯಾಪಾರಿವಲಯ ಸ್ಥಾಪಿಸಬೇಕು.(ಸ್ಟ್ರೀಟ್ ವೆಂಡರ್ಸ್ ಜೋನ್) ವ್ಯಾಪಾರ ಮಾಡುವ ಸ್ಥಳ, ವ್ಯಾಪಾರ ಮಾಡುಬಹುದಾದ ಸ್ಥಳ, ವ್ಯಾಪಾರ ಮಾಡಲಾಗದ ಸ್ಥಳವನ್ನು ಗುರುತಿಸಬೇಕು ಎಂದು ನಗರಸಭೆ ಸದಸ್ಯ ಶಿವಶಂಕರ್ ತಿಳಿಸಿದರು.

ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.

ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.

ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು  ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.

ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.

ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ

Leave a Reply

Your email address will not be published. Required fields are marked *