ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…