ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಲು ಪರ್ಯಾಯ ಜಾಗ ನೀಡುವ ಕುರಿತು ಸಭೆ

ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು‌ ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.

ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದಲ್ಲಿ ಅಗತ್ಯವಿರುವ ಕಡೆ ವ್ಯಾಪಾರಿವಲಯ ಸ್ಥಾಪಿಸಬೇಕು.(ಸ್ಟ್ರೀಟ್ ವೆಂಡರ್ಸ್ ಜೋನ್) ವ್ಯಾಪಾರ ಮಾಡುವ ಸ್ಥಳ, ವ್ಯಾಪಾರ ಮಾಡುಬಹುದಾದ ಸ್ಥಳ, ವ್ಯಾಪಾರ ಮಾಡಲಾಗದ ಸ್ಥಳವನ್ನು ಗುರುತಿಸಬೇಕು ಎಂದು ನಗರಸಭೆ ಸದಸ್ಯ ಶಿವಶಂಕರ್ ತಿಳಿಸಿದರು.

ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.

ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.

ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು  ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.

ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.

ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

3 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

4 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

11 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

17 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago