ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…