ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…