ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…