ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಇಕ್ಕೆಲಗಳಲ್ಲಿ ಇದ್ದಂತಹ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೀದಿಬದಿ ವ್ಯಾಪಾರಸ್ಥರು. ಪರ್ಯಾಯ ವ್ಯವಸ್ಥೆ ಮಾಡಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದ ರಸ್ತೆಬದಿ ವ್ಯಾಪಾರಸ್ಥರು.
ಈ ಹಿನ್ನೆಲೆ ಇಂದು ನಗರಸಭೆ ಸದಸ್ಯರು, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖಾಧಿಕಾರಿಗಳ ಜೊತೆ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಬೀದಿಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತವೆ ಎಂಬುದು ಸರಿಯಲ್ಲ. ಮೊದಲು ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಬೇಕು, ಅವೈಜ್ಞಾನಿಕ ರಸ್ತೆಗಳನ್ನು ಸರಿಪಡಿಸಬೇಕು, ಬೀದಿಬದಿಯಲ್ಲಿ ವಿದ್ಯುತ್ ದೀಪಗಳನ್ನು ಅವಳಡಿಸಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನದ ಹಿತದೃಷ್ಟಿಯಿಂದ ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಗರಸಭೆ ಸದಸ್ಯ ಎ.ಜಿ.ಶ್ರೀನಿವಾಸ್ ತಿಳಿಸಿದರು.
ನಗರದೊಳಗಡೆ ಭಾರೀ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿ ಅಪಘಾತ ತಪ್ಪಿಸಬೇಕು ಎಂದು ನಗರಸಭೆ ಸದಸ್ಯರು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ನಗರದಲ್ಲಿ ಆರು ವ್ಯಾಪಾರ ವಲಯಗಳನ್ನು ಸ್ಥಾಪಿಸಲು ಕೂಡಲೇ ಸರ್ಕಾರಿ ಜಾಗ ಗುರುತಿಸಿ ತಹಶೀಲ್ದಾರ್ ಅವರಿಗೆ ವರದಿ ನೀಡಲಾಗುವುದು, ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೌರಾಯುಕ್ತ ಪರಮೇಶ್ ಅವರು ಸಭೆಯಲ್ಲಿ ತಿಳಿಸಿದರು.
ವಾಹನದಟ್ಟಣೆ ಆಗುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ವ್ಯಾಪಾರಸ್ಥರಿಗೆ ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಬ್ಬ ಮುಗಿಯುವವರೆಗೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟ ನಗರಸಭೆ
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…