ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…