Categories: ವೈರಲ್

ಬೀದಿಯಲ್ಲಿ ತಂದೆ-ಮಗನ ಜಗಳ: ಅಪ್ಪನ ಕಾರಿಗೆ ಡಿಕ್ಕಿ ಹೊಡೆಯುವ ರಭಸದಲ್ಲಿ ಸಾರ್ವಜನಿಕರಿಗೆ ಗುದ್ದಿದ ಮಗನ ಕಾರು: ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯ: ಇಬ್ಬರ ಸ್ಥಿತಿ ಚಿಂತಾಜನಕ

ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

5 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

10 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

11 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

11 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

13 hours ago